ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ದಾನಿಗಳಿಂದ ದಿನಸಿ, ಆಹಾರ ಸಾಮಗ್ರಿ ಸ್ವೀಕರಿಸಲು ಸ್ವೀಕೃತಿ ಕೇಂದ್ರಗಳ ಆರಂಭ

ಧಾರವಾಡ (prajakiran. com) ಮೇ. 25: ಜಿಲ್ಲೆಯಲ್ಲಿ ಜೂನ್ 7ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ವಲಸೆ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಆಹಾರಧಾನ್ಯ. ಕಿಟ್‍ಗಳನ್ನು ನೀಡಬಯಸುವ ದಾನಿಗಳಿಂದ ಕಿಟ್‍ಗಳನ್ನು ಸ್ವೀಕರಿಸಲು ಜಿಲ್ಲೆಯಲ್ಲಿ 2 ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿದೆ.

ಉಸ್ತುವಾರಿಗಾಗಿ ಸಿಬ್ಬಂದಿಗಳ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನೀತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಧಾರವಾಡದ ಮಿನಿವಿಧಾನಸೌಧದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಕೇಂದ್ರ ತೆರಯಲಾಗಿದ್ದು, ಇದರ ಉಸ್ತುವಾರಿಯನ್ನು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ನಿರ್ದೇಶಕ ಎಸ್.ಪಿ.ಸಾವಕಾರ.(9845297783), ಕೆ.ಎಫ್.ಸಿ.ಎಸ್.ಸಿಯ ಈಶ್ವರ ಪಾಟೀಲ (8792027822) ಮತ್ತು ಹಿರಿಯ ಕಾರ್ಮೀಕ ನಿರೀಕ್ಷಕರಾದ ಮೀನಾಕ್ಷಿ ಶಿಂಧಿಹಟ್ಟಿ (6363520066) ಅವರನ್ನು ನೇಮಿಸಲಾಗಿದೆ.

ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಹತ್ತಿರ ಇರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಕೇಂದ್ರ ತೆರಯಲಾಗಿದ್ದು, ಇದರ ಉಸ್ತುವಾರಿಯನ್ನು ಧಾರವಾಡದ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಪಾಟೀಲ(9880725639), ಹುಬ್ಬಳ್ಳಿಯ ತಹಶೀಲ್ದಾರ ಕಚೇರಿಯ ಆಹಾರ ನಿರೀಕ್ಷಕ ಎ.ಎ.ಖತೀಬ್(8310490713) ಮತ್ತು ಹುಬ್ಬಳ್ಳಿಯ 1 ನೇ ವೃತ್ತದ ಡಿಇಓ ಮಹೇಶ ದೇವರಕರ್ (9964422892) ಅವರನ್ನು ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಎಸೆನ್ಸಿಯಲ್ ಇಂಡಸ್ಟ್ರಿಯಲ್ ಪಾಸ್ ಪಡೆಯಲು ಸಹಾಯವಾಣಿ

ಧಾರವಾಡ ಜಿಲ್ಲೆಯಾದ್ಯಾಂತ ಕೋವಿಡ್-19 ಸಾಂಕ್ರಾಮಿಕ ರೋಗ ತೆಡೆಗಟ್ಟುವ ಹಿನ್ನೇಲೆಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತ ದೃಷ್ಠಿಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 7ರ ಬೆಳಿಗ್ಗೆ 6 ಗಂಟೆವರೆಗೆ ಲಾಕ್‍ಡೌನ್ ವಿಧಿಸಿ, ಆದೇಶಿಸಲಾಗಿದೆ.

ಈ ಆದೇಶದಲ್ಲಿ ತಿಳಿಸಿರುವ ಸಹಾಯವಾಣಿಯನ್ನು ಕಾರಣಾಂತರಗಳಿಂದ ಬದಲಾವಣೆ ಮಾಡಿದೆ.

ಇನ್ನೂ ಮುಂದೆ ಸಹಾಯವಾಣಿ ಸಂಖ್ಯೆ 9449847648ಗೆ ಕರೆ ಮಾಡಬಹುದು. ಮತ್ತು ಎಸೆನ್ಸಿಯಲ್ ಇಂಡಸ್ಟ್ರಿಯಲ್ ಪಾಸ್ ಕುರಿತ ಸಂಬಂಧಿಸಿದ ದಾಖಲೆಗಳನ್ನು ಇ-ಮೇಲ್ ಮುಖಾಂತರ covid19dwddc@Gmail.com ಗೆ ಸಲ್ಲಿಸಿ, ಬೆಳಿಗ್ಗೆ 10:30 ರಿಂದ ಸಂಜೆ 5.30 ರವರೆಗೆ ಮಾಹಿತಿ ಪಡೆಯಬಹುದಾಗಿದೆ 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *