ನವದೆಹಲಿ prajakiran.com : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ, ಹೃದ್ರೋಗ ತಜ್ಞ ಡಾ.ಕೆ.ಕೆ. ಅಗರ್ವಾಲ್(62) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಅಗರವಾಲ್ ಕೊನೆಯುಸಿರೆಳೆದಿದ್ದಾರೆ.
ವಿಡಿಯೋಗಳ ಮೂಲಕ ಕೋಟ್ಯಾಂತರ ಜನರಿಗೆ ಶಿಕ್ಷಣ ನೀಡುತ್ತಿದ್ದರು.
ಡಾ.ಕೆ.ಕೆ. ಅಗರ್ವಾಲ್ ಅವರು ಹೃದ್ರೋಗ ತಜ್ಞರಾಗಿದ್ದು, ಹಾರ್ಟ್ ಕೇರ್ ಫೌಂಡೇಷನ್ ಆಫ್ ಇಂಡಿಯಾದ ಮುಖ್ಯಸ್ಥರಾಗಿದ್ದರು.
ಅವರಿಗೆ 2010ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ಭಾರದಾನ ಮಾಡಲಾಗಿತ್ತು.