ಶಿವಮೊಗ್ಗ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡ, ರೂ 29,30,310/- ಅಂದಾಜು ಮೌಲ್ಯದ ಒಟ್ಟು 637 ಕೆ.ಜಿ ಮಾದಕ ವಸ್ತು ಗಾಂಜಾವನ್ನು ನಾಶಪಡಿಸಲಾಯಿತು.
ಶನಿವಾರದಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸದಸ್ಯರು, ಪರಿಸರ ಅಧಿಕಾರಿಗಳು ಮತ್ತು ಪಂಚರ ಸಮಕ್ಷಮ ಈ ಕ್ರಮ ಜರುಗಿಸಲಾಗಿದೆ.
ಮಾಚೇನಹಳ್ಳಿಯ ಶುಶ್ರುತಾ ಬಯೋ ಮೆಡಿಕಲ್ ತ್ಯಾಜ್ಯ ವಿಲೇವಾರಿ ಘಟಕದ ಸಿಬ್ಬಂದಿ ನಾಶಪಡಿಸಿದರು.