ಹುಬ್ಬಳ್ಳಿ prajakiran.com : ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ ಬುಧವಾರ ಹುಬ್ಬಳ್ಳಿಯಲ್ಲಿ ಮೌನ ಮುರಿದಿದ್ದಾರೆ.
ರಾಜ್ಯವನ್ನೇ ನಡುಗಿಸಿದ ಡ್ರಗ್ಸ್ ಮಾಫಿಯಾದ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೂದ್, ಶೀಘ್ರದಲ್ಲಿಯೇ ಡ್ರಗ್ಸ್ ಪೆಡ್ಲರ್ ಗಳ ಹೆಡೆಮುರಿ ಕಟ್ಟೊ ಭರವಸೆಯನ್ನೂ ನೀಡಿದ್ದಾರೆ.
ಬೆಂಗಳೂರಿನ ಸಿಸಿಬಿಯವರು ನಿರಂತರವಾಗಿ ದಾಳಿ ನಡೆಸಿ ಡ್ರಗ್ಸ್ ಜಾಲ ಭೇದಿಸುತ್ತಿದ್ದಾರೆ. ಅದನ್ನ ಮಟ್ಟ ಹಾಕಲು ಪೊಲೀಸರು ಅವಿರತ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಎನ್ ಸಿಬಿ ಹಾಗೂ ಸಿಸಿಬಿ ಯವರು ಸದ್ಯಕ್ಕೆ ಈ ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ತನಿಖೆ ಒಂದು ಹಂತಕ್ಕೆ ತಲುಪಿದ ನಂತರ ಹೆಸರು ಹಾಗೂ ವಿವರಗಳನ್ನ ಬಹಿರಂಗ ಪಡಿಸಲಾಗುವುದು ಎಂದರು.
ಇದೇ ವೇಳೆ ಡ್ರಗ್ಸ್ ಮಾಫಿಯಾ ರಾಜ್ಯದ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಚಿತ್ರರಂಗದ ಹಲವರ ನಂಟು ಕೇಳಿ ಬಂದ ಬೆನ್ನಲ್ಲೇ ಆರೋಪ ಪ್ರತ್ಯಾರೋಪ ಜೋರಾಗಿವೆ.