ರಾಜ್ಯ

ಖಾನಾಪುರ ತಾಲೂಕಿನ ಅನೇಕ ಹಳ್ಳಿಗಳಿಗೆ ಆತಂಕ….!

ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳ

ಬೆಳಗಾವಿ prajakiran.com :  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡುಮೂರು ದಿನಗಳಿಂದ ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳವಾಗಿದೆ.

ಇದರಿಂದಾಗಿ ಜಿಲ್ಲೆಯ ಜನತೆ ಮತ್ತೋಮ್ಮೆ ಪ್ರವಾಹ ಭೀತಿಗೆ ಸಿಲುಕಿದ್ದಾರೆ. ಕಳೇದ ವರ್ಷವು ಕೂಡ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು.

ಇದೀಗ ಮತ್ತೇ ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ಪಾತ್ರದ ಗ್ರಾಮಗಳ ಜನತೆ ಆತಂಕಕ್ಕೆ ಸಿಲುಕಿದ್ದಾರೆ.

ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ಹೊರವಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದು ಸುತ್ತಲಿನ ಹತ್ತಾರು ಹಳ್ಳಿಗಳ ಜನತೆ ನಿದ್ದೆ ಕಡೆಸಿದೆ.

ಈಗಾಗಲೇ ಸಾವಿರಾರು ಎಕರೆ ಪ್ರದೇಶದ ಜಮೀನಿಗಳಿಗೆ ನೀರು ನುಗ್ಗಿದ್ದು ಬಹುತೇಕ ಬೆಳೆಗಳು, ಜಲಾವೃತಗೊಂಡಿವೆ.

ಹೀಗಾಗಿ ನದಿ ತಟದಲ್ಲಿರುವ ಬಹುತೇಕ ಹಳ್ಳಿಗಳ ಗ್ರಾಮಸ್ಥರು ಕಂಗಲಾಗಿದ್ದಾರೆ. ಮಳೆ ಅಬ್ಬರ ಇನ್ನೂ ಮುಂದುವರೆದಿರುವುದು ಅವರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *