ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೇ ಸಿಬಿಐ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ತನಿಖೆ ಮುಂದುವರೆದಿದ್ದು, ಈ ಹಿಂದೆ ಬೆಳಗಾವಿಯ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿಯನ್ನು ಹಲವು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು.
ತುಳಜಪ್ಪ ಸುಲ್ಪಿ ಸದ್ಯ ವಿಜಯಪುರ ಡಿವೈಎಸ್ಪಿಯಾಗಿದ್ದು, ಅವರು ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಮೇಲೆ ರಾಜೀಸಂಧಾನಕ್ಕೆ ಒತ್ತಡ ಹೇರಿದ್ದ ಗಂಭೀರ ಆರೋಪ ಎದುರಿಸುತ್ತಿದ್ದಾರೆ.
ಸಂಧಾನದ ಮಧ್ಯವರ್ತಿಯಾಗಿದ್ದ ಆರೋಪದ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಅವರ ಬಳಿ ಮಹತ್ತರ ಮಾಹಿತಿಗಳನ್ನು ಸಂಗ್ರಹಿಸಿದರು ಎಂದು ತಿಳಿದುಬಂದಿದೆ.
ಇದೇ ವೇಳೆ ಕಾಂಗ್ರೆಸ್ ಮುಖಂಡ ಮನೋಜ ಕರ್ಜಗಿ ಹಾಗೂ ಹಲವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ.