ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರಿಂದ 24 ರವರೆಗೆ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರ ಹಾಗೂ ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಇದಕ್ಕೆ ಅಗತ್ಯ ಪಾಸ್ ಪಡೆಯಲು ಸಂಬಂಧಪಟ್ಟರು www.supportdharwad.in ಪೋರ್ಟಲ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಪಾಸ್ ಪಡೆಯಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಒಂದು ವೇಳೆ ಇ ಪಾಸ್ ಇಲ್ಲದೆ, ಹುಬ್ಬಳ್ಳಿ ಧಾರವಾಡದಲ್ಲಿ ಅನಗತ್ಯ ಸಂಚಾರ ಮಾಡಿದಲ್ಲಿ ಮಹಾನಗರ ಪೊಲೀಸ್ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿದರೆ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ಅಲ್ಲದೆ, ಅವರಿಂದ ವಾಹನ ಜಪ್ತಿ, ದಂಡ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ಎದುರಿಸಬೇಕಾಗುತ್ತದೆ.
ಹೀಗಾಗಿ ಜಿಲ್ಲೆಯ ಜನತೆ ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇದ್ದು ಅಗತ್ಯ ಸಹಕಾರನೀಡಬೇಕು ಎಂದು ಮನವಿ ಮಾಡಿದೆ.