ಬೆಂಗಳೂರು prajakiran.com : ತೌಕ್ತೆ ಚಂಡಮಾರುತಕ್ಕೆ ಕರಾವಳಿ ಜಿಲ್ಲೆ ತತ್ತರಿಸುತ್ತಿದೆ.
ತೌಕ್ತೆ ಅಬ್ಬರಕ್ಕೆ ಸಿಲುಕಿದ್ದ ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದು, ಎನ್ಡಿಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತ ಎಫೆಕ್ಟ್ ಹೆಚ್ಚಾಗಿದ್ದು, ಈ ಹಿನ್ನೆಲ್ಲೆ ರಾಜ್ಯ ಸರ್ಕಾರ ಚಂಡಮಾರುತ ಎದುರಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದು, ಒಟ್ಟು 1 ಸಾವಿರ ಸಿಬ್ಬಂದಿಯನ್ನು ಚಂಡಮಾರುತ ಎದುರಿಸಲು ನಿಯೋಜಿಸಲಾಗಿದೆ.
ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ತಂಡಗಳನ್ನು ಕರಾವಳಿಯ 3 ಜಿಲ್ಲೆಗಳಿಗೆ ನಿಯೋಜನೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.