ಧಾರವಾಡ prajakiran.com : ಗ್ರಾಮ ಪಂಚಾಯತಿ ಚುನಾವಣೆಯನ್ನು ಶಾಂತಿಯುತವಾಗಿ, ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವುದಕ್ಕಾಗಿ ರಾಜ್ಯ ಚುನಾವಣಾ ಆಯೋಗವು ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗಳ ವೀಕ್ಷಕರನ್ನಾಗಿ ತೋಟಗಾರಿಕಾ ಇಲಾಖೆಯ ಅಪರ ನಿರ್ದೇಶಕರಾಗಿರುವ ಹಿರಿಯ ಅಧಿಕಾರಿ ಚಂದ್ರಶೇಖರ್.ಎನ್. ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ.
ಚುನಾವಣಾ ವೀಕ್ಷಕರು ನಾಮಪತ್ರ ಪರಿಶೀಲಿಸುವ ಡಿಸೆಂಬರ್ 12 ರಿಂದ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಡಿಸೆಂಬರ್ 30 ರ ಮುಕ್ತಾಯದವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ನೇಮಕ ಆದೇಶದಲ್ಲಿ ತಿಳಿಸಿದ್ದಾರೆ.