ಬೆಂಗಳೂರು Prajakiran.com : ರಾಜ್ಯದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಲಾಕ್ ಮಾಡಿ ಇದೀಗ ಸೋಂಕು ಸ್ವಲ್ಪ ಹಿಡಿತಕ್ಕೆ ಬಂದ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳು ಅನ್ಲಾಕ್ ಆಗಿವೆ.
ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಜನರ ಆರೋಗ್ಯ ರಕ್ಷಣೆ ಸಲುವಾಗಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಗಳನ್ನು ಮುಂದೂಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ಸಚಿವ ಸಂಪುಟದ ನಿರ್ಣಯದಂತೆ ಮುಂದುಡಲಾದ ಚುನಾವಣೆಗಳನ್ನು ಎಪ್ರಿಲ್ 26 , 2021 ರಿಂದ ಮುಂದಿನ 6 ತಿಂಗಳ ಅವಧಿಗೆ ಮುಂದೂಡಲಾಗಿದೆ.
ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್ ಸೂಚನೆಯಲ್ಲಿ ತಿಳಿಸಿದ್ದಾರೆ.
ಈ ಆದೇಶದ ಅನ್ವಯ ರಾಜ್ಯದಲ್ಲಿ ಸೆಪ್ಟೆಂಬರ್ ವೇಳೆಗೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ ಇಲ್ಲವೇ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕು.