ರಾಜ್ಯ

ಧಾರವಾಡದ ಕಲಘಟಗಿಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಮೇಲೆ ಕಾಡಾನೆ ದಾಳಿ : ಪ್ರಾಣಾಪಾಯದಿಂದ ಪಾರು…..!

ಕಲಘಟಗಿ prajakiran.com : ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಾಳಿ ಮಾಡಿವೆ.

ಆದರೆ, ಅದೃಷ್ಪಾವಶತ್ ಪ್ರಾಣಾಪಾಯದಿಂದ ಪಾರು ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ,ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದವು.

ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲ್ಲೂ ಕಾರ್ಯಚರಣೆ ಮಾಡುತ್ತಿದ್ದ ವೇಳೆ  ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ.

ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮೇಶ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ,ಸುರೇಶ ಅರವಳ್ಳಿ, ಪರಶುರಾಮ, ಕೃಷ್ಣ ಪಮ್ಮಾರ ಅವರಿಗೆ ಆನೆಯು ಕ್ವಾರಿಯಿಂದ ದಾಳಿ ಮಾಡಿದ್ದರಿಂದ ಹೆಚ್ಚಿನ ಗಾಯ ಸಂಭವಿಸಿದೆ.

ಇನ್ನುಳಿದ ಸಿಬ್ಬಂದಿಗಳಿಗೂ ಸಣ್ಣ ಪುಟ್ಟ ಗಾಯ ಸಂಭವಿಸಿದ್ದು ಕೂಡಲೇ ಎಲ್ಲ ಸಿಬ್ಬಂದಿಗಳನ್ನ ಸ್ಥಳೀಯ ಸರಕಾರಿ ತಾಲ್ಲೂಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *