ರಾಜ್ಯ

ಧಾರವಾಡದಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಅರಣ್ಯ ಇಲಾಖೆಯಿಂದ ಮುಂದುವರಿದ ಕಾರ್ಯಾಚರಣೆ

ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಭಾನುವಾರ ಪ್ರತ್ಯಕ್ಷವಾಗಿದ್ದ ಕಾಡಾನೆ ಸೋಮವಾರ ಗಿರಿನಗರ, ತಡಸಿನಕೊಪ್ಪ ಭಾಗದಲ್ಲಿ ಕಾಣಿಸಿಕೊಂಡಿತ್ತು.

ಕಾಡಾನೆಯನ್ನು ಸಂರಕ್ಷಿಸಿ ಮರಳಿ ಅರಣ್ಯಕ್ಕೆ ಸೇರಿಸಲು ಅರಣ್ಯ ಇಲಾಖೆಯು ಸಿಬ್ಬಂದಿ ಹರ ಸಾಹಸ ಮಾಡುತ್ತಿದ್ದು, ಕಾರ್ಯಾಚರಣೆ ನಡೆಸುತ್ತಿದೆ.

ಹೀಗಾಗಿ ಜನತೆ ಅನಗತ್ಯವಾಗಿ ಗುಂಪು ಸೇರಿ ಗೊಂದಲದ ವಾತಾವರಣ ಸೃಷ್ಟಿಸಬಾರದು.

ಅರಣ್ಯ ಇಲಾಖೆಯು ಕಾಡಾನೆಯನ್ನು ಸಂರಕ್ಷಿಸಿ ,ಜನರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಸಹಜತೆ ತರಲಾಗುವುದು.

ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗೆ ಧಾರವಾಡದ ವಿದ್ಯಾಗಿರಿ ಪೊಲೀಸರು ಸಾಥ್ ನೀಡಿದ್ದು ಒಂಟಿ ಸಲಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸುತ್ತಲೇ ಇದೆ.

ಅದನ್ನು ಬಂದ ದಾರಿಯಂದ ಮತ್ತೇ ಅರಣ್ಯ ಪ್ರದೇಶಕ್ಕೆ ಮರಳುವಂತೆ ಮಾಡಲು ಪಟಾಕಿ ಸಿಡಿಸಲಾಗುತ್ತಿದೆ.

ಹೀಗಾಗಿ ಕಾಡಾನೆ ಬೆದರಿ ಓಡುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *