ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಭಾನುವಾರ ಪ್ರತ್ಯಕ್ಷವಾಗಿದ್ದ ಕಾಡಾನೆ ಸೋಮವಾರ ಗಿರಿನಗರ, ತಡಸಿನಕೊಪ್ಪ ಭಾಗದಲ್ಲಿ ಕಾಣಿಸಿಕೊಂಡಿತ್ತು.
ಕಾಡಾನೆಯನ್ನು ಸಂರಕ್ಷಿಸಿ ಮರಳಿ ಅರಣ್ಯಕ್ಕೆ ಸೇರಿಸಲು ಅರಣ್ಯ ಇಲಾಖೆಯು ಸಿಬ್ಬಂದಿ ಹರ ಸಾಹಸ ಮಾಡುತ್ತಿದ್ದು, ಕಾರ್ಯಾಚರಣೆ ನಡೆಸುತ್ತಿದೆ.
ಹೀಗಾಗಿ ಜನತೆ ಅನಗತ್ಯವಾಗಿ ಗುಂಪು ಸೇರಿ ಗೊಂದಲದ ವಾತಾವರಣ ಸೃಷ್ಟಿಸಬಾರದು.
ಅರಣ್ಯ ಇಲಾಖೆಯು ಕಾಡಾನೆಯನ್ನು ಸಂರಕ್ಷಿಸಿ ,ಜನರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಸಹಜತೆ ತರಲಾಗುವುದು.
ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಸಿಬ್ಬಂದಿಗೆ ಧಾರವಾಡದ ವಿದ್ಯಾಗಿರಿ ಪೊಲೀಸರು ಸಾಥ್ ನೀಡಿದ್ದು ಒಂಟಿ ಸಲಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸುತ್ತಲೇ ಇದೆ.
ಅದನ್ನು ಬಂದ ದಾರಿಯಂದ ಮತ್ತೇ ಅರಣ್ಯ ಪ್ರದೇಶಕ್ಕೆ ಮರಳುವಂತೆ ಮಾಡಲು ಪಟಾಕಿ ಸಿಡಿಸಲಾಗುತ್ತಿದೆ.
ಹೀಗಾಗಿ ಕಾಡಾನೆ ಬೆದರಿ ಓಡುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.