ಭದ್ರತಾ ಪಡೆ ಉಗ್ರರ ನಡುವೆ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆಯ ನಾಲ್ವರು ಹುತಾತ್ಮರು
ಶ್ರೀನಗರ prajakiran.com : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಭದ್ರತಾ ಪಡೆ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಪೂಂಚ್ ಜಿಲ್ಲೆಯ ಡಿಕೆಜಿ ಬಳಿ ಕಾರ್ಯಾಚರಣೆ ನಡೆಯುತ್ತಿತ್ತು.
ಆಗ ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.
ಇದೆ ವೇಳೆ ಜಮ್ಮು-ಕಾಶ್ಮೀರದ ಬಂಡಿಪೋರದಲ್ಲಿ ಕಾಶ್ಮೀರದ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್ಕೌಂಟರ್ ಮೂಲಕ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎನ್ಕೌಂಟರ್ನಲ್ಲಿ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಸಂಘಟನೆಯ ಉಗ್ರ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಆತ ಬಂಡಿಪೋರದಲ್ಲಿ ನಡೆದ ನಾಗರಿಕನ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.