ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ : ಈಶ್ವರಪ್ಪ
*ಅಪ್ಪ-ಮಕ್ಕಳ ಕಪಿಮುಷ್ಠಿಯಲ್ಲಿ ಸಿಲುಕಿ ಕಾರ್ಯಕರ್ತರ ಪರದಾಟ*
*ಯಡಿಯೂರಪ್ಪ ವಿರುದ್ಧ ಮುಂದುವರೆದ ವಾಗ್ದಾಳಿ*
ಶಿವಮೊಗ್ಗ ಪ್ರಜಾಕಿರಣ. ಕಾಮ್ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್
ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶಗೆ ಟಿಕೆಟ್ ತಪ್ಪಿಸಲಾಗಿದೆ. ಹೀಗಾಗಿ ಬಿ.ವೈ ರಾಘವೇಂದ್ರ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಈಶ್ವರಪ್ಪ ನಿರ್ಧರಿಸಿದ್ದಾರೆ.
ಈ ಹಿಂದೆ ನನಗೆ ಅನೇಕ ಬಾರಿ ಅನ್ಯಾಯ ಮಾಡಲಾಗಿದೆ ಎಂದು
ತಮ್ಮ ಅಭಿಮಾನಿಗಳ ಹಾಗೂ ಬೆಂಬಲಿಗರ ಸಭೆ ನಡೆಸಿ ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಹರಿಹಾಯ್ದರು.
ನಾನು ನೋಂದ ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡ್ತೆನೆ.
ಹಿಂದುತ್ವದ ಪರವಾಗಿ ಗಟ್ಟಿಯಾಗಿ ಹೋರಾಟ ಮಾಡಿದ ಅನೇಕರಿಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಆರೋಪಿಸಿದರು.
ಉಡುಪಿ-
ಚಿಕ್ಕಮಗಳೂರುದಿಂದ ಶೋಭಾ ಕರಂದ್ಲಾಜೆ ಬದಲಿಗೆ ಸಿ.ಟಿ. ರವಿ ಅವರಿಗೆ ಟಿಕೆಟ್ ನೀಡಬೇಕಾಗಿತ್ತು.ಮೈಸೂರಿನ ಟಿಕೆಟ್ ಪ್ರತಾಪ ಸಿಂಹಗೆ ನೀಡಬೇಕಾಗಿತ್ತು.
ಅದೇ ರೀತಿ ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಈಶ್ವರಪ್ಪ ಹರಿಹಾಯ್ದರು.
ಯಡಿಯೂರಪ್ಪ ಎದೆಬಗೆದರೆ ಒಂದು ಕಡೆ ಅವರ ಮಕ್ಕಳು ಇನ್ನೊಂದು ಕಡೆ ಶೋಭಾ ಕರಂದ್ಲಾಜೆ ಕಾಣ್ತಾರೆ ಎಂದು ಕಾರ್ಯಕರ್ತರು ವ್ಯಂಗ್ಯ ವಾಡ್ತಾಇದ್ದಾರೆ ಎಂದು ಕುಟುಕಿದರು.
ನಲವತ್ತು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದವರಿಗೆ ಹೀಗೆ ತಾಯಿಯ ಕತ್ತು ಹಿಸುಕುವ ಕೆಲಸ ಆಗ್ತಾ ಇದೆ ಆದರೂ ಕಣ್ಣು ಮುಚ್ಚಿ ಕುಳಿತುಕೊಳ್ಳಲಾ ಎಂದು ಕೆ.ಎಸ್
ಈಶ್ವರಪ್ಪ ಗುಡುಗಿದರು.