ರಾಜ್ಯ

ಮಾಜಿ ಸಚಿವ ಡಿ.ಬಿ. ಇನಾಮದಾರ ಇನ್ನಿಲ್ಲ

ರಾಣಿ ಶುಗರ್ಸ್ ಅಧ್ಯಕ್ಷರಾಗಿ, ಕಿತ್ತೂರು ಸೈನಿಕ ಶಾಲೆ ಅಧ್ಯಕ್ಷರಾಗಿ ಜನಮನ್ನಣೆ   ಗಳಿಸಿದ್ದ ಕಿತ್ತೂರು ಧಣಿ

ಬೆಂಗಳೂರು ಪ್ರಜಾಕಿರಣ.ಕಾಮ್ : ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನ ಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ
ಮಾಜಿ ಸಚಿವರಾದ ಡಿ.ಬಿ. ಇನಾಮದಾರ ಅವರು ಇಂದು ಇಹಲೋಕ ತ್ಯಜಿಸಿದರು.

ಅವರು ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾದರು.

ಅವರು ಕಿತ್ತೂರು ಕ್ಷೇತ್ರದಿಂದ ಒಟ್ಟು ಒಂಬತ್ತು ಬಾರಿ ಸ್ಪರ್ಧಿಸಿದ್ದರು. ಅದರಲ್ಲಿ ಐದು ಬಾರಿ ಗೆದ್ದರೆ, ನಾಲ್ಕು ಬಾರಿ ಸೋಲು ಅನುಭವಿಸಿದ್ದರು. ಅವರು ಎಸ್.ಎಂ. ಕೃಷ್ಣ ಸರಕಾರದಲ್ಲಿ ಸಕ್ಕರೆ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿದ್ದರು.

ರಾಣಿ ಶುಗರ್ಸ್ ಅಧ್ಯಕ್ಷರಾಗಿ, ಕಿತ್ತೂರು ಸೈನಿಕ ಶಾಲೆ ಅಧ್ಯಕ್ಷರಾಗಿ ಜನಮನ್ನಣೆ   ಗಳಿಸಿದ್ದ ಕಿತ್ತೂರು ಧಣಿ ಈ ಬಾರಿ ಕೂಡ ಸ್ಪರ್ಧಿಸಲು ಸಜ್ಜಾಗಿದ್ದರು‌.

ಆದರೆ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರು. ಅವರ ಅಕಾಲಿಕ ನಿಧನದಿಂದ ಕಿತ್ತೂರು ಕ್ಷೇತ್ರದ ಜನರಿಗೆ ಹಾಗೂ ವಿಶೇಷವಾಗಿ ಅವರ ಕಾಂಗ್ರೆಸ್ ಅಭಿಮಾನಿಗಳಿಗೆ ಅಪಾರ ನೋವುಂಟು ಆಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *