ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಆರೋಪಿಗಳಿಗೆ ಅಕ್ರಮವಾಗಿ ಪಿಸ್ತೂಲ್ ಸರಬರಾಜು ಮಾಡಿದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳ ತಂಡ
ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿಯನ್ನು ಬಂಧಿಸಿದೆ.
ಈ ಕುರಿತು ಹಲವು ಬಾರಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದ ಸಿಬಿಐ ನಿನ್ಬೆಯಷ್ಷೆ ಅವರನ್ನು ವಿಜಯಪುರ ದಿಂದ ವಶಕ್ಕೆ ತೆಗೆದುಕೊಂಡು ಬಂದು ವಿಚಾರಣೆ ನಡೆಸಿದ್ದರು.
ಆ ಬಳಿಕ ಸಿಬಿಐ ಅಧಿಕಾರಿಗಳ ತಂಡ ಬಂಧಿಸಿ, ಸೋಮವಾರ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.
ನ್ಯಾಯಾಧೀಶರಾದ ಗಂಗಾಧರ ಸಿಎಂ ಅವರು ಪ್ರಕರಣದ ವಿಚಾರಣೆ ನಡೆಸಿ, ಚಂದ್ರಶೇಖರ ಇಂಡಿಯನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಸಿಸಿದರು.
ಈ ವೇಳೆ ಇನ್ನು
ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ಸಿಬಿಐ ಕಸ್ಡಡಿಗೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ
ಚಂದ್ರಶೇಖರ ಇಂಡಿ ಪರ ವಕೀಲರು
ನಾಳೆ ತಕರಾರು ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.
ಹೀಗಾಗಿ ನಾಳೆ ಡಿ.15ರಂದು ಸಿಬಿಐ ಕಸ್ಟಡಿ ನೀಡುವ ಬಗ್ಗೆ ವಿಚಾರಣೆ ನಡೆಸಿ, ತೀರ್ಪು ನೀಡುವುದಾಗಿ ಹೇಳಿದರು.