ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೀಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ ಹದಿನಾಲ್ಕು ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಧಾರವಾಡದ ಮೂರನೇ ಹೆಚ್ಚುವರಿ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು.
ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿ ಇರುವುದರಿಂದ ಸಿಬಿಐ ಅಧಿಕಾರಿಗಳ ತಂಡನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ನ್ಯಾಯಾಧೀಶೆಯರಾದ ಶ್ರೀಮತಿ ಎಂ. ಪಂಚಾಕ್ಷರಿ ಅವರು ಈ ಮಹತ್ವದ ಆದೇಶ ಹೊರಡಿಸಿದರು.
ಹೀಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ.
ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರು
ಡಿಸೆಂಬರ್ 7 ರವರೆಗೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ದಿನದೂಡಬೇಕಾಗಿದೆ.