ನವದೆಹಲಿ prajakiran.com : ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪ್ರಣವ್ ಮುಖರ್ಜಿ (84) ವಿಧಿವಶರಾಗಿದ್ದಾರೆ.
ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೆ, ಕರೋನಾ ವೈರಸ್ ಸೋಂಕಿನಿಂದಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅಭಿಜಿತ್ ಮುಖರ್ಜಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಕಾಲೇಜು ಅಧ್ಯಾಪಕರಾಗಿ, ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದ ಪ್ರಣವ್ ಮುಖರ್ಜಿ ಅವರು ಆನಂತರ ಪಶ್ಚಿಮ ಬಂಗಾಳದ ಲೋಕಸಭಾ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಐದು ದಶಕಗಳ ಕಾಲ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು.
ಅವರು ಕಾಂಗ್ರೆಸ್ ಸರಕಾರದಅವಧಿಯಲ್ಲಿ ಹಣಕಾಸು ಸಚಿವರಾಗಿ, ರಕ್ಷಣಾ ಖಾತೆ, ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಆಗಿದ್ದರು. ಇಂದಿರಾಗಾಂಧಿ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಪ್ರಧಾನಿ ಹುದ್ದೆಯ ಆಕಾಂಕ್ಷೆಯಾಗಿದ್ದರು.
2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿ ಹುದ್ದೆ ತ್ಯಜಿಸಿದಾಗ ಇವರ ಹೆಸರು ಮುಂಚೂಣಿಗೆ ಬಂದಿತ್ತು.
ಬಳಿಕ ರಾಷ್ಟ್ರಪತಿಯನ್ನು ಹುದ್ದೆಯನ್ನು ಏರಿ ಉತ್ತಮ ಆಡಳಿತ ನಡೆಸಿದ್ದರು. ಮೂವರು ಮಕ್ಕಳು ಇದ್ದಾರೆ. ಇವರಅಗಲಿಕೆ ದೇಶದ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ.