ಅಂತಾರಾಷ್ಟ್ರೀಯ

ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು

*ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ: ಮೋದಿ ನಿಮ್ಮ ಹಾದಿ ತಪ್ಪಿಸಿ ಎತ್ತಿ ಕಟ್ಟುತ್ತಿದ್ದಾರೆ: ಬಹಿರಂಗವಾಗಿ ಘರ್ಜಿಸಿದ ಸಿ.ಎಂ.ಸಿದ್ದರಾಮಯ್ಯ*

*ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನೂ ಇಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶದ ನುಡಿ*

*ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ನೀವಲ್ಲವೇ? ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರಲ್ಲವೇ : ಸಿ.ಎಂ.ಸಿದ್ದರಾಮಯ್ಯ ಆಕ್ರೋಶದ ಪ್ರಶ್ನೆ*

*ಹಿಂದುಳಿದ ಜಾತಿ-ಸಮುದಾಯಗಳನ್ನು ಇನ್ನೂ ಎಷ್ಟು ವರ್ಷ ವಂಚಿಸಿ-ಮೋಸ ಮಾಡ್ತೀರಿ?*

ಬಾಗಲಕೋಟೆ ಪ್ರಜಾಕಿರಣ.ಕಾಮ್  ಏ 27: ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.

ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಈ ರೀತಿಯಾಗಿ ಪ್ರಶ್ನಿಸಿದರು.

ದೇಶದಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದ ಬಳಿಕ ಬಿಜೆಪಿ ಸೋಲುತ್ತದೆ ಎನ್ನುವ ಸುಳಿವು ಮೋದಿಯವರಿಗೆ ಸ್ಪಷ್ಟವಾಗಿ ಸಿಕ್ಕಿದೆ. ಈ ಕಾರಣಕ್ಕೆ ಭಯಾನಕ ಸುಳ್ಳು ಹೇಳ್ಕೊಂಡು ತಿರುಗುತ್ತಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎನ್ನುವ ಸುಳ್ಳನ್ನು ಹೇಳುವ ಮೂಲಕ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಎಚ್ಚರ ವಹಿಸಿ ಎಂದು ಹಿಂದುಳಿದ ಜಾತಿ-ಸಮುದಾಯಗಳಿಗೆ ಎಚ್ಚರಿಸಿದರು.

ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳ್ತಿದಾರೆ. ಇವರಿಗೆ ಸಂವಿಧಾನದ ತಿಳಿವಳಿಕೆ ಇಲ್ಲ. ಈ ಮಟ್ಟದ ಸುಳ್ಳು ಹೇಳುವ ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನಾದರೂ ಇದೆಯಾ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.

ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ಇದೇ ಬಿಜೆಪಿ. ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ಪ್ರತಿಭಟಿಸಿದ್ದು ಇದೇ ಬಿಜೆಪಿ. ಹಿಂದುಳಿದವರ, ಮಹಿಳೆಯರ ವಿರೋಧಿಯಾಗಿರುವ ಇವರು ಈಗ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟಿ ಏಕ ಕಾಲದಲ್ಲಿ ಎರಡೂ ಸಮುದಾಯಗಳ ಜೀವಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *