ಅಪರಾಧ

ಚಾಮರಾಜನಗರ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ …!

ಚಾಮರಾಜನಗರ Prajakiran.com : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಎಚ್. ಮೂಕಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.

ಗ್ರಾಮದ ಮಹದೇವಪ್ಪ (47), ಮಂಗಳಮ್ಮ (40), ಮಕ್ಕಳಾದ ಜ್ಯೋತಿ (14), ಶ್ರುತಿ (12) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಡು ಬಡತನ, ಸಾಲಬಾಧೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಗ್ರಾಮದವರೊಬ್ಬರು ಇಂದು ಬೆಳಿಗ್ಗೆ ಮಹಾದೇವಪ್ಪ ಅವರನ್ನು ಕೆಲಸದ ನಿಮಿತ್ತ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ.‌

ಮನೆಯೊಳಗಿನಿಂದ ಯಾವುದೇ ಶಬ್ದ ಬರಲಿಲ್ಲ. ಆಗ ಮನೆಯ ಮೇಲೆ ಹತ್ತಿ ಹೆಂಚು ತೆರೆದು ನೋಡಿದಾಗ, ನಾಲ್ವರೂ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಹಾದೇವಪ್ಪ ಅವರಿಗೆ ಮೂವರು ಪುತ್ರಿಯರಿದ್ದು, ಹಿರಿಯ ಪುತ್ರಿಗೆ ವಿವಾಹವಾಗಿದೆ. ಪೂರ್ವ ಠಾಣೆ ಪೊಲೀಸರು ಈಗ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *