ರಾಜ್ಯ

ಸುರತ್ಕಲ್ ದಲ್ಲಿ ಮತ್ತೊಂದು ಬರ್ಬರ ಕೊಲೆ : ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿ ನಿಷೇಧಾಜ್ಞೆ

ಮಂಗಳೂರು prajakiran.com : ಪ್ರವೀಣ್ ನೆಟ್ಟಾರು ಹತ್ಯೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ದಲ್ಲಿ ಗುರುವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಮತ್ತೊಂದು ಬರ್ಬರ ಕೊಲೆ ನಡೆದಿದೆ.

ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಗುರುವಾರ ರಾತ್ರಿ ಯುವಕನೋರ್ವನ ಮೇಲೆ ದಾಳಿ ನಡೆಸಿದ್ದು, ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆಯೇ ಈ ತಲವಾರು ದಾಳಿ ನಡೆಸಲಾಗಿದೆ.

ಫಾಜಿಲ್  ನನ್ನು ಅಟ್ಟಾಡಿಸಿ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಮುಸುಕುಧಾರಿಗಳಾಗಿದ್ದರು.

ಹಲ್ಲೆಯ ಪರಿಣಾಮ ಯುವಕನಿಗೆ ಸಾಕಷ್ಟು ರಕ್ತ ಹೋಗಿದ್ದು, ತಕ್ಷಣವೇ ಆತನನ್ನು ಎಜೆ‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ.

ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾರೂ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್    ಮನವಿ ಮಾಡಿದರು.

ತನಿಖೆ ನಂತರವಷ್ಟೇ ಸತ್ಯಾಂಶ ಹೊರಬರಲಿದೆ. ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಹೇಳಿದರು.

ಒಂದು ವಾರದಲ್ಲಿ ಮೂರು ಕೊಲೆ ಮಾಡಲು ಪೊಲೀಸ್ ಇಲಾಖೆ ವೈಫಲ್ಯ ಕಾರಞ ಎಂದು ಜನರು ಕಿಡಿಕಾರಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *