ರಾಜ್ಯ

ಧಾರವಾಡದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಮೇಲೆ ಎಫ್‌ಐಆರ್ ದಾಖಲು

ಧಾರವಾಡ prajakiran.com :
ಧಾರವಾಡದಲ್ಲಿ ವೀರ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ
ಕಾಂಗ್ರೆಸ್ ಮುಖಂಡರ ಮೇಲೆ ಉದ್ದೇಶ ಪೂರ್ವಕವಾಗಿ ದೊಂಬಿ ಮಾಡಿಸುವ ಹಾಗೂ ದೇಶಭಕ್ತರ ಮನಸ್ಸಿಗೆ ಘಾಸಿ ಉಂಟು ಮಾಡಿದ ಕುರಿತು ಎಫ್‌ಐಆರ್ ದಾಖಲು ಆಗಿದೆ‌.

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ 1860 ಸೆಕ್ಷನ್ 143, 147,153, 504,149 ಅಡಿ ಎಫ್‌ಐಆರ್ ದಾಖಲಾಗಿದ್ದು,
ಬಜರಂಗ ದಳ ಮುಖಂಡ ಶಿವಾನಂದ ಸತ್ತಿಗೇರಿ ದೂರು ನೀಡಿದ್ದಾರೆ.

ಅವರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಹಾಗೂ ಧಾರವಾಡ ಜಿಲ್ಲೆಯ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೇರಿ 12 ಜನರನ್ನು ಹೆಸರಿಸಲಾಗಿದೆ.

ಧಾರವಾಡ -71 ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅರವಿಂದ ಏಗನಗೌಡರ ಅವರನ್ನು ಎ. 1 ಮಾಡಲಾಗಿದೆ. ವಾರ್ಡ್ ನಂ. 6 ರ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಮೈನೋದ್ದೀನ್ ನದಾಫ್ ಎ.2, ಕಾಂಗ್ರೆಸ್ ಮುಖಂಡ ಮನೋಜ ಕರ್ಜಗಿ, ಎ.3, ರಾಬರ್ಟ್ ದದ್ದಾಪುರಿ ಎ.4, ಶಿಂಗನಮುಲ್ಲಾ ಎ.5, ಆಸಿಫ್ವಸನದಿ ಎ.5,
ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ,ಆನಂದ ಸಿಂಗನಾಥ, ನಾಗರಾಜ ಗೌರಿ, ಸೂರಜ್ ಪುಡಕಲಕಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಂದು ಎಫ್‌ಐಆರ್ ನಲ್ಲಿ ವಿವರಿಸಲಾಗಿದೆ.

ನಿನ್ನೆ ಮಧ್ಯಾಹ್ನ ಧಾರವಾಡ ಜಿಲ್ಲಾಧಿಕಾರಿ‌ ಕಚೇರಿ ಎದುರು ನಡೆದಿದ್ದ ಪ್ರತಿಭಟನೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನದ ವೇಳೆ ಮೊಟ್ಟೆ ಎಸೆದು ಸಾವರ್ಕರ್ ಫೊಟೋಗಳನ್ನೂ ಕಾರ್ಯಕರ್ತರು ಸುಟ್ಟಿದ್ದರು.ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *