ರಾಜ್ಯ

ಧಾರವಾಡದ ಕರಡಿಗುಡ್ಡದ ರೈತನ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು : ನಾಲ್ಕು ಜಾನುವಾರು ಸಾವು, ಲಕ್ಷಾಂತರ ರೂಪಾಯಿ ಹತ್ತಿ, ಕಾಳು ಕಡಿ ಬೆಂಕಿಗೆ ಆಹುತಿ

ಧಾರವಾಡ prajakiran.com : ಅನ್ನದಾತನ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಇದರಿಂದಾಗಿ ಕರಡಿಗುಡ್ಡ ಗ್ರಾಮದ
ಚನ್ನಬಸಪ್ಪ ಹನಿ ಅವರ ತೋಟದ ಮನೆಯಲ್ಲಿ ಇದ್ದ ನಾಲ್ಕು ಜಾನುವಾರುಗಳು ಸುಟ್ಟು ಕರಕಲಾಗಿವೆ.

ಇದಲ್ಲದೆ, ಅಂದಾಜು 60-70 ಚೀಲ ಹತ್ತಿ ಹಾನಿಗೀಡಾಗಿದ್ದು, ಅಪಾರ ಪ್ರಮಾಣದ ದವಸ, ಧಾನ್ಯ, ಮೇವು ಭಸ್ಮಗೊಂಡಿದೆ.

ರೈತ ಚನಬಸಪ್ಪ ಹನಿ ಅವರ ಮೇಲಿನ ಹಗೆತನಕ್ಕೆ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *