ವರದಿ : ಪ್ರಶಾಂತ ಹೂಗಾರ
ಸವದತ್ತಿ prajakiran.com : ಪಟ್ಟಣದ ಹೊರವಲಯದಲ್ಲಿದ್ದ ಕಬ್ಬು ಬೆಳೆಗೆ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಬೆಳೆ ಸುಟ್ಟು ಭಸ್ಮವಾಗಿದೆ. ಮಧ್ಯಾಹ್ನ 1:30 ರ ವೇಳೆಗೆ ಹೊರವಲಯದಲ್ಲಿ ಹೊಲದ ಮೇಲೆ ಎಳೆಯಲಾದ ವಿದ್ಯುತ್ ತಂತಿಯ ಶಾಟ್೯ ಸರ್ಕೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ.
ಪ್ರೇಮಾ ವಿರುಪಾಕ್ಷಿ ಕೌಜಲಗಿ ಎಂಬುವವರಿಗೆ ಸೇರಿದ 3 ಎಕರೆಗಳಷ್ಟು ಕಬ್ಬು ಬೆಳೆ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂದಾಗುವ ಭಾರೀ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೆಂಕಿ ಅವಘಡಕ್ಕೆ ಸಂಭಂದಿಸಿದಂತೆ ಪ್ರಕರಣ ದಾಖಲು ಮಾಡಲಾಗಿದೆ.