ಅಪರಾಧ

ಸವದತ್ತಿಯಲ್ಲಿ ಶ್ಯಾಟ್೯ ಸರ್ಕೂಟ್ ನಿಂದ ಕಬ್ಬಿಗೆ ಬೆಂಕಿ….!

ವರದಿ : ಪ್ರಶಾಂತ ಹೂಗಾರ

ಸವದತ್ತಿ prajakiran.com : ಪಟ್ಟಣದ ಹೊರವಲಯದಲ್ಲಿದ್ದ ಕಬ್ಬು ಬೆಳೆಗೆ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಬೆಳೆ ಸುಟ್ಟು ಭಸ್ಮವಾಗಿದೆ. ಮಧ್ಯಾಹ್ನ 1:30 ರ ವೇಳೆಗೆ ಹೊರವಲಯದಲ್ಲಿ ಹೊಲದ ಮೇಲೆ ಎಳೆಯಲಾದ ವಿದ್ಯುತ್ ತಂತಿಯ ಶಾಟ್೯ ಸರ್ಕೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ.

ಪ್ರೇಮಾ ವಿರುಪಾಕ್ಷಿ ಕೌಜಲಗಿ ಎಂಬುವವರಿಗೆ ಸೇರಿದ 3 ಎಕರೆಗಳಷ್ಟು ಕಬ್ಬು ಬೆಳೆ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂದಾಗುವ ಭಾರೀ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೆಂಕಿ ಅವಘಡಕ್ಕೆ ಸಂಭಂದಿಸಿದಂತೆ ಪ್ರಕರಣ ದಾಖಲು ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *