ರಾಜ್ಯ

ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರದಲ್ಲಿ ಮೊದಲ ದಿನ 7 ನಾಮಪತ್ರ ಸಲ್ಲಿಕೆ

ಧಾರವಾಡ ಪ್ರಜಾಕಿರಣ. ಕಾಮ್  ಏ.13 : ಕರ್ನಾಟಕ ವಿಧಾಸಭೆಗೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆ ಮೊದಲ ದಿನ (ಏ.13) ಕುಂದಗೋಳ 1, ಧಾರವಾಡ 3, ಹುಬ್ಬಳ್ಳಿ ಧಾರವಾಡ ಪೂರ್ವ 1 ಮತ್ತು ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರಕ್ಕೆ 2 ಸೇರಿ ಒಟ್ಟು 7 ನಾಮಪತ್ರಗಳು ಸಲ್ಕಿಕೆ ಆಗಿವೆ ಎಂದು ಜಿಲ್ಲಾ ಚುನಾವಣಾಧಿಕಶರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕುಂದಗೋಳ- 70 ವಿಧಾನಸಾಭಾ ಮತಕ್ಷೇತ್ರಕ್ಕೆ ಶಿವಾನಂದ ಹಣಮಂತಪ್ಪ ಮುತ್ತಣ್ಣವರ (ಭಾ.ಜ.ಪಾ), ಹುಬ್ಬಳ್ಳಿ ಧಾರವಾಡ ಪೂರ್ವ-72 ವಿಧಾನಸಭಾ ಮತಕ್ಷೇತ್ರಕ್ಕೆ ವೀರಭದ್ರಪ್ಪ ಹಾಲಹರವಿ (ಜನತಾದಳ (ಜ್ಯಾತ್ಯಾತೀತ)), ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರಕ್ಕೆ ಮಲ್ಲಿಕಾರ್ಜುನ ರೊಟ್ಟಗವಾಡ (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ) ಅವರು ಎರಡು ನಾಮತ್ರಗಳನ್ನು ಮತ್ತು ಧಾರವಾಡ-71 ವಿಧಾನಸಭಾ ಮತಕ್ಷೇತ್ರಕ್ಕೆ ಅಮೃತ ಅಯ್ಯಪ್ಪ ದೇಸಾಯಿ ( ಭಾ.ಜ.ಪಾ), ಮಧುಲತಾ ಗೌಡರ (ಪಕ್ಷೇತರ), ಸಿದ್ದಲಿಂಗೇಶ್ವರ ಬಾಗೂರ ( ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ) ನಾಮತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *