ಕಾಸರಗೋಡು Prajakiran.com : ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೀನುಗಾರರು ನಾಪತ್ತೆಯಾದ ಘಟನೆ ಶನಿವಾರ ಬೆಳಗಿನ ಜಾವದಲ್ಲಿ ನಡೆದಿದೆ.
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರು ಎನ್ನಲಾಗುತ್ತದೆ. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಪತ್ತೆ ಆದ ಕಾರ್ಮಿಕರು ಸಂದೀಪ್ ಕಾರ್ತಿಕ್ ಹಾಗೂ ರತೀಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ.