ಕಾರವಾರ Prajakirana.com : ಯಾಂತ್ರೀಕೃತ ದೋಣಿಗಳು, ಬಲೆ, ಸಾಧನಗಳನ್ನು ಉಪಯೋಗಿಸಿ ಜೂನ್ 1 ರಿಂದ ಜುಲೈ 31 ರವರೆಗೆ ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ. ನಾಗರಾಜ ತಿಳಿಸಿದ್ದಾರೆ.
ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಮಾತ್ರಅನುಮತಿ ಇರುತ್ತದೆ ಎಂದು ಅವರು ಹೇಳಿದ್ದಾರೆ.
ಈ ಅಧಿಸೂಚನೆಯನ್ನು ಉಲ್ಲಂಘಿಸಿದರೆ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡ ಹಾಗೂ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗಿತ್ತಾರೆಂದು ತಿಳಿಸಿದ್ದಾರೆ.