*ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು*
*ಸಿಸಿಬಿ ಪೊಲೀಸರ ಭರ್ಜರಿ*
*ಬಂಧಿತರಿಂದ 7 ಪಿಸ್ತೂಲ್, 42 ಮದ್ದುಗುಂಡು, 2 ಡ್ರಾಗನ್ ವಶಕ್ಕೆ*
ಬೆಂಗಳೂರು ಪ್ರಜಾಕಿರಣ.ಕಾಮ್ : ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರನ್ನು ಸೈಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಎಂದು ಗುರುತಿಸಲಾಗಿದೆ.
ಹೆಬ್ಬಾಳ ಪೊಲಿಸ್ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದ ಮಸೀದಿ ಬಳಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತರು ಖೆಡ್ಡಾಕ್ಕೆ ಬಿದ್ದಿದ್ದಾರೆ.
ಅವರ ಬಳಿಯಿದ್ದ 7 ನಾಡ ಬಂದೂಕು, 42 ಜೀವಂತ ಗುಂಡುಗಳು, 2 ಡ್ಯಾಗನ್, 2 ಸ್ಯಾಟ್ಲೈಟ್ ಫೋನ್, 4 ವಾಕಿಟಾಕ್ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದರು ಎಂದು ತಿಳಿದುಬಂದಿದೆ.
ಆದರೆ, ಪ್ರಕರಣದ ಪ್ರಮುಖ ಆರೋಪಿ ಜುನೈದ್ ಅಹ್ಮದ್ ನಾಪತ್ತೆಯಾಗಿದ್ದಾನೆ
ಇತನ ಮೇಲೆ ಕೊಲೆ, ಕಿಡ್ನ್ಯಾಪ್ ಪ್ರಕರಣಗಳಿವೆ.
ಇತ ಪರಪ್ಪನ ಅಗ್ರಹಾರ ಜೈಲ್ಲಿಂದಲೇ ಗ್ಯಾಂಗ್ ಕಟ್ಟಿಕೊಂಡು ಜೈಲಿನಿಂದ ಹೊರಬರುವಾಗಲೇ ಶಂಕಿತ ಉಗ್ರನಾಗಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.
ಇಂದು ಸಿಸಿಬಿ ಬಂಧಿಸಿದ ಬಹುತೇಕ ಶಂಕಿತ ಉಗ್ರರೆಲ್ಲರೂ ಜುನೈದ್ ಗ್ಯಾಂಗ್ ನವರು ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.