ರಾಜ್ಯ

ಪ್ರವಾಹ ಭೀತಿಯಲ್ಲಿ ಬಾಗಲಕೋಟೆಯ ಹಲವು ಗ್ರಾಮಗಳು…!

ಬಾಗಲಕೋಟೆ prajakiran.com  : ಪ್ರವಾಹ ಭೀತಿಯ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ನದಿ ತೀರದ ಹಲವು ಹಳ್ಳಿಗಳ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯಲ್ಲಿ ಮೂರು ನದಿಗಳ ಆರ್ಭಟ ಜೋರಾಗಿದೆ. ಹೀಗಾಗಿ ನದಿತೀರದ ಜನತೆ ಮತ್ತೆ ಕಂಗಾಲಾಗಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ.

ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಅಪಾಯ ಮೀರಿ ಹರಿಯುತ್ತಿದೆ ಮಲಪ್ರಭಾ ನದಿ ಕಳೆದ ವರ್ಷ ಕೂಡ ಗ್ರಾಮದ ಹಲವು ಮನೆ ನೆಲಸಮಗೊಂಡಿದ್ದವು.

ಈ ವರ್ಷ ಮತ್ತೆ ಪ್ರವಾಹ ಬಂದರೆ ಹೇಗೆ ಎಂಬ ಭೀತಿಯಲ್ಲಿದ್ದಾರೆ.ಇದೇ ವೇಳೆ ಕಳೆದ ವರ್ಷದ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದ 7 ಕುಟುಂಬಳಿಗೆ ಈವರೆಗೆ ಪರಿಹಾರ ಸಿಕ್ಕಿಲ್ಲ ಎಂದು ಗೊತ್ತಾಗಿದೆ.

ಅದರಲ್ಲೂ ಗೋವನಕೊಪ್ಪ ಗ್ರಾಮದ ತಾಯಿ ಮಗಳು ನಿನ್ನೆಯಿಂದ ಪರದಾಡುವಂತಾಗಿದೆ. ಅವರಿಗೆ ಕೂಡ ಪರಿಹಾರ ನೀಡಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *