ಚಿತ್ರದುರ್ಗ prajakiran.com : ವಿಷಪೂರಿತ ಆಹಾರ ಸೇವಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.
ಈ ದುರ್ಘಟನೆಯಲ್ಲಿ ತಿಪ್ಪಾನಾಯ್ಕ್(46), ಇವರ ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ(75) ಮೃತ ದುರ್ದೈವಿಗಳು.
ರಾಹುಲ್ (18) ಮತ್ತು ರಮ್ಯ(16) ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ರಾಗಿ ಮುದ್ದೆ, ಸಾರು ಸೇವಿಸಿದ ಬಳಿಕ 5 ಜನರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.