ರಾಜ್ಯ

ಕೋವಿಡ್ ನಿಯಮ ಉಲ್ಲಂಘಿಸಿ ಮೋಜು-ಮಸ್ತಿಗೆ ಹೊರಟಿದ್ದ ಅರಣ್ಯಧಿಕಾರಿಗಳು : ತಡೆದ ಗ್ರಾಮಸ್ಥರ ಮೇಲೆ ಬಿತ್ತು ಕೇಸ್…!

ಚಿಕ್ಕಮಗಳೂರು Prajakiran.com : ಕೊರೋನಾ ನಿಯಮಗಳನ್ನು ಉಲ್ಲಂಘಿಸಿ ಮೋಜು ಮಸ್ತಿಗೆಂದು ತೆರಳುತ್ತಿದ್ದ ಅರಣ್ಯಧಿಕಾರಿಗಳನ್ನು ಗ್ರಾಮಸ್ಥರೇ ತಡೆದು ವಾಪಾಸ್ ಕಳುಹಿಸಿದ ಘಟನೆ ಇಲ್ಲಿನ ತರೀಕೆರೆ ತಾಲೂಕಿನ ಸಂತವೇರಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಹಲವು ಅರಣ್ಯಾಧಿಕಾರಿಗಳು, ಹತ್ತಕ್ಕೂ ಹೆಚ್ಚು ಜೀಪು ಮತ್ತು ಕಾರಿನಲ್ಲಿ ಮೋಜು ಮಸ್ತಿಗೆಂದು ತೆರಳಿದ್ದರು. ಈ ವೇಳೆ ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿಯಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತಡೆದಿದ್ದರು.

ಕೊರೋನಾ ಸೋಂಕು ಹೆಚ್ಚಾಗುತ್ತಿದೆ ನಮ್ಮ ಊರಿಗೆ ಬರಬೇಡಿ ಎಂದು ಗ್ರಾಮಸ್ಥರು ತಡೆದಿದ್ದರು. ಜನರು ಸಂಕಷ್ಟದಲ್ಲಿರುವಾಗ ಮೋಜು-ಮಸ್ತಿ ಬೇಕಾ ಎಂದು ಪ್ರಶ್ನಿಸಿದ್ದರು. ಸ್ಥಳೀಯರು ತಡೆದ ಹಿನ್ನೆಲೆ ಅಧಿಕಾರಿಗಳು ಅಲ್ಲಿಂದ ಹಿಂತುರುಗಿದ್ದಾರೆ.

ಆದರೆ ಇದೀಗ ಅರಣ್ಯಾಧಿಕಾರಿಗಳನ್ನು ತಡೆದು ಪ್ರಶ್ನೆ ಮಾಡಿದ್ದಕ್ಕೆ ಸ್ಥಳೀಯರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ನಾಲ್ವರು ಗ್ರಾಮಸ್ಥರ ವಿರುದ್ಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಒಟ್ಟನಲ್ಲಿ ಈ ಘಟನೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *