ಧಾರವಾಡ prajakiran.com : ಹಂದಿಗಳ ಕಾಟದಿಂದ ಬೇಸತ್ತ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಪಂಚಾಯ್ತಿ ಕಚೇರಿಗೆ ಬೀಗ ಹಾಕಿದ ಘಟನೆ ಮಂಗಳವಾರ ನಡೆದಿದೆ.
ಹೊಲ, ಗದ್ದೆಗಳಿಗೆ ನುಗ್ಗುತ್ತಿರುವ ಹಂದಿಗಳು ಬೆಳೆಯನ್ನೆಲ್ಲ ನಾಶ ಮಾಡುತ್ತಿವೆ.
ಮೊದಲೇ ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ್ದು, ಇದರ ಮಧ್ಯೆ ಹಂದಿಗಳು ಹೊಲಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ.
ಈ ಸಂಬಂಧ ಪಂಚಾಯ್ತಿ ಪಿಡಿಓ ಅವರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಹಂದಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ರೈತರು, ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಂದಿ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪಂಚಾಯ್ತಿಯವರೇ ಪರಿಹಾರ ನೀಡಬೇಕು ಎಂದು ಅನ್ನದಾತರು ಒತ್ತಾಯಿಸಿದರು.