ಬೀಜ, ರಸಗೊಬ್ಬರ ಖರೀದಿಸಲು ಪ್ರತಿದಿನ ಬೆಳಿಗ್ಗೆ 6 ರಿಂದ 12ರವರೆಗೆ ಅವಕಾಶ;
ಧಾರವಾಡ (prajakiran. com) ಮೇ.25: ಜಿಲ್ಲೆಯಲ್ಲಿ ಜೂನ್ 7ರವರೆಗೆ ಜಾರಿ ಇರುವ ಲಾಕ್ಡೌನ್ ಅವಧಿಯಲ್ಲಿ ರೈತರು ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಲು, ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಹಾಗೂ ಮಳಿಗೆಗಳಿಗೆ ತೆರಳಲು ಬೆಳಿಗ್ಗೆ 6 ಗಂಟೆಯಿಂದ ಅಪರಾಹ್ನ 12 ಗಂಟೆಯವರೆಗೆ ಅವಕಾಶ ನೀಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪರಿಷ್ಕøತ ಆದೇಶ ಹೊರಡಿಸಿದ್ದಾರೆ.
ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಅಂಗಡಿಗಳನ್ನು ತೆರೆದು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ.
ಮತ್ತು ಹುಬ್ಬಳ್ಳಿ ಹಾಗೂ ಧಾರವಾಡ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ತೆರಯಲು ಅವಕಾಶವಿರುತ್ತದೆ.
ಅಲ್ಲಿಗೆ ತೆರಳುವ ರೈತರು ಗ್ರಾಮ ಪಂಚಾಯಿತಿ ಪಿ.ಡಿ.ಓ ಅಥವಾ ಗ್ರಾಮ ಲೆಕ್ಕಿಗರ ಅನುಮತಿ ಪತ್ರ ಪಡೆಯಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಪರಿಷ್ಕತ ಆದೇಶದಲ್ಲಿ ತಿಳಿಸಿದ್ದಾರೆ.