ಧಾರವಾಡ prajakiran.com : ಪ್ರಸಕ್ತ ವರ್ಷ ಹಾನಿಯಾದ ರೈತರ ಬೆಳೆಗಳಿಗೆ ಹಾಗೂ ಹಾನಿಯಾದ ಮನೆಗಳಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವಂತೆ ನವ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮಂಗಳವಾರ ಪ್ರತಿಭಟಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆ ಪರಿಹಾರ ಕೆಲ ರೈತರಿಗೆ ಮಾತ್ರ ಸಿಕ್ಕಿದೆ. ಇನ್ನು ಕೆಲವರಿಗೆ ಸಿಕ್ಕಿಲ್ಲ ಎಂದು ದೂರಿದರು.
ಪರಿಹಾರ ಸಿಗದ ರೈತರಿಗೂ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಹಾಗೂ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ನಿಂಗನಗೌಡ ಪಾಟೀಲ, ಸಂಜಯ ವಾಘ, ದೇವೇಂದ್ರಗೌಡ ಪಾಟೀಲ, ನೀಲಕಂಠಪ್ಪ ಕಲ್ಲೂರ, ಕಾಳಪ್ಪ ಬಡಿಗೇರ ಅನೇಕರು ಇದ್ದರು.