ಬೆಳಗಾವಿ prajakiran.com : ಜಾನುವಾರುಗಳೊಂದಿಗೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರವಾಹ ಸಂತ್ರಸ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ತಹಶೀಲ್ದಾರ ಕಚೇರಿ ಮುಂದೆ ಈ ಪ್ರತಿಭಟನೆ ನಡೆಸಿ ಸಂತ್ರಸ್ತರು ತಮ್ಮ ಅಸಮಾಧಾನ ಹೊರ ಹಾಕಿದರು.
ಪ್ರವಾಹಕ್ಕೆ ಒಳಗಾದ ಸಂತ್ರಸ್ತರಿಗಾಗಿ ರೈತ ಸಂಘಟನೆಯಿಂದ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರವಾಹ ಸಮಯದಲ್ಲಿ ಯಾವುದೇ ರೀತಿಯ ಪರಿಶೀಲನೆ ನಡೆಸದ ಕಾರಣಕ್ಕೆ ರೈತ ಸಂಘಟನೆ ಹಾಗೂ ಸಂತ್ರಸ್ತ್ರರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.
ಮಳೆಯಲ್ಲಿ ಅಂಡಿಗೆ ಮಾಡುವ ಮೂಲಕ ಪ್ರತಿಭಟಿಸಿ, ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಪಟ್ಟು ಹಿಡಿದಿದ್ದರು.
ನ್ಯಾಯಕೊಡಿ ಇಲ್ಲವೇ ಮತ್ತೆ ಉಗ್ರ ಹೋರಾಟ ಮಾಡಲಾಗುವುದು ಎಂದು ರೈತ ಸಂಘಟನೆ ಮುಖಂಡರು ಎಚ್ಚರಿಸಿದರು.