ಜಿಲ್ಲೆ

ಧಾರವಾಡ ಜಿಲ್ಲೆಯ 83 ಸಾವಿರ ರೈತರಿಗೆ 67 ಕೋಟಿ ರೂ.ಬೆಳೆಹಾನಿ ಪಾವತಿ

ಧಾರವಾಡ prajakiran.com ಡಿ‌.10:.

ಜಿಲ್ಲೆಯಲ್ಲಿ ಕಳೆದ ಜುಲೈ ಮತ್ತು ನವಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿವಿಧ ಕೃಷಿ , ತೋಟಗಾರಿಕೆ ಬೆಳೆಗಳ ಹಾನಿಯ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ದಿನಂಪ್ರತಿ ದಾಖಲಿಸಲಾಗಿದ್ದು ಈವರೆಗೆ 83,266 ರೈತರಿಗೆ ಸರಕಾರದಿಂದ ರೂ . 67.45 ಕೋಟಿ ಪರಿಹಾರ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.

6 ಮನೆಗಳು ಪೂರ್ಣ ಹಾನಿಯಾಗಿದ್ದು ಪ್ರತಿ ಮನೆಗೆ ರೂ.5 ಲಕ್ಷ ಪಾವತಿಸಬೇಕಾಗಿದ್ದು ಮೊದಲನೇ ಕಂತು 95,100 ರೂ.ಗಳಂತೆ ಒಟ್ಟು 5,70,600 ರೂ.ಪಾವತಿಸಿದೆ.

492 ಮನೆಗಳು ತೀವ್ರತರ ಹಾನಿಯಾಗಿದ್ದು ಮೊದಲನೇ ಕಂತು 95,100 ರೂ.ಗಳಂತೆ 4,67,89,200 ರೂ.ಪಾವತಿಸಿದೆ 960 ಮನೆಗಳು ಭಾಗಶಃ ಹಾನಿಯಾಗಿದ್ದು ತಲಾ 50 ಸಾವಿರ ರೂ.ಗಳಂತೆ ಒಟ್ಟು 4 ಕೋಟಿ 80 ಲಕ್ಷ ರೂ.ಪರಿಹಾರ ಧನ ಪಾವತಿ ಮಾಡಲಾಗಿದೆ .

ಪರಿಹಾರ ಧನವನ್ನು ಫಲಾನುಭವಿಗಳ ಉಳಿತಾಯ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ.

ಈವರೆಗೆ ಒಟ್ಟು 1458 ಹಾನಿಯಾದ ಮನೆಗಳಿಗೆ 9.54 ಕೋಟಿ ರೂ. ಪರಿಹಾರ ಧನ ಪಾವತಿಸಲಾಗಿದೆ. ಉಳಿದ ಮನೆಗಳ ಹಾಗೂ ರೈತರ ಬೆಳೆ ಹಾನಿ ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *