ಬೆಂಗಳೂರು prajakiran.com
ಬೆಳ್ಳಂ ಬೆಳಗ್ಗೆ ಅಟ್ಟಾಡಿಸಿ ಕೊಲೆ ಮಾಡಿದ್ದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಿಡಿಯುವ ವೇಳೆ ಹೈಡ್ರಾಮಾ ನಡೆದಿದ್ದು, ಪೊಲೀಸರ ಮೇಲೆಯೇ ದಾಳಿನಡೆಸಿದ್ದರು. ಆಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
ಬಂಧಿತರನ್ನು ಫೀಟರ್, ಸೂರ್ಯ ಎಂದು ಗುರುತಿಸಲಾಗಿದ್ದು, ಇವರನ್ನು
ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ತೀವ್ರಗೊಳಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಈ ಇಬ್ಬರು ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದಿದೆ.
24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ತಾಕೀತು ಮಾಡಿದ್ದ ಬೆನ್ನಲ್ಲೇ ಆರೋಪಿಗಳು ಸೆರೆ ಸಿಕ್ಕಿರುವುದು ಸಮಾಧಾನದ ಸಂಗತಿಯಾಗಿದೆ.
ಕೊಲೆಗೂ ಮುನ್ನ ವೀಡಿಯೋ ತಿರುಗಿಸಿದ್ದ ಖದೀಮರು ಕೊಲೆ ಮಾಡಿದ ವೀಡಿಯೋ ವೈರಲ್ ಆಗಿರುವುದು ಪೊಲೀಸರ ತನಿಖೆಗೆ ಸಹಕಾರಿಯಾಗಿದೆ.