ರಾಜ್ಯದ 9 ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿ
ಬೆಂಗಳೂರು prajakiran.com : ನೆರೆ ರಾಜ್ಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿಯಾಗಿದೆ.
ಅಲ್ಲದೆ, ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ರಾಜ್ಯದ 9 ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದೆ.
ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ 10 ಗಂಟೆಗೆ ಬದಲಾಗಿ 9 ಗಂಟೆಯಿಂದಲೇ ಅನ್ವಯಿಸುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ
ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದೆ.
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
ಕೇವಲ ಅವಶ್ಯಕ ಸೇವೆ ಒದಗಿಸುವ ಸರಕಾರಿ ಇಲಾಖೆಗಳ ಸಿಬ್ಬಂದಿ ಕೆಲಸ ಮಾಡಬಹುದು.
ಆಹಾರೋದ್ಯಮ ಸೇರಿದಂತೆ ಅವಶ್ಯಕ ಸೇವೆ ಒದಗಿಸುವ ಉದ್ಯಮಗಳು ವ್ಯವಹಾರ ಮಾಡಬಹುದು ಎಂದು ವಿವರಿಸಿದ್ದಾರೆ