ರಾಜ್ಯ

ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಇಂದಿನಿಂದ 10 ಗಂಟೆಗೆ ಬದಲಾಗಿ 9 ಗಂಟೆಗೆ

ರಾಜ್ಯದ 9 ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿ

ಬೆಂಗಳೂರು prajakiran.com : ನೆರೆ ರಾಜ್ಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿಯಾಗಿದೆ.

ಅಲ್ಲದೆ, ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ರಾಜ್ಯದ 9 ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದೆ‌.

ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ 10 ಗಂಟೆಗೆ ಬದಲಾಗಿ 9 ಗಂಟೆಯಿಂದಲೇ ಅನ್ವಯಿಸುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ
ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದೆ.

ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.

ಕೇವಲ ಅವಶ್ಯಕ ಸೇವೆ ಒದಗಿಸುವ ಸರಕಾರಿ ಇಲಾಖೆಗಳ ಸಿಬ್ಬಂದಿ ಕೆಲಸ ಮಾಡಬಹುದು.
ಆಹಾರೋದ್ಯಮ ಸೇರಿದಂತೆ ಅವಶ್ಯಕ ಸೇವೆ ಒದಗಿಸುವ ಉದ್ಯಮಗಳು ವ್ಯವಹಾರ ಮಾಡಬಹುದು ಎಂದು ವಿವರಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *