ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಯಾದ್ಯಂತ ತನ್ನದೇ ಆದ ಹವಾ ಹೊಂದಿದ್ದ ರೌಡಿಶೀಟರ್ ಫ್ರೂರ್ಟ್ ಇರ್ಫಾನ್ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದೆ.
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಆಲ್ ತಾಜ್ ಹೋಟೆಲ್ ನಲ್ಲಿ ಹಾಡಹಗಲೇ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಇದರಿಂದಾಗಿ ರಕ್ತದ ಮಡುವಿನಿಂದ ಬಿದ್ದು ಹೊರಳಾಡುತ್ತಿದ್ದ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮಗೆ ತಿಳಿಸಿದ್ದಾರೆ.
ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಜ್ಞೆ ತಪ್ಪಿದ್ದು, ರಕ್ತ ಸಾಕಷ್ಟು ಹೋಗಿದೆ ಎಂದು ತಿಳಿದುಬಂದಿದೆ.
ಇತನ ಮೇಲೆ ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ ಹಾಗೂ ಭೂ ಅತಿಕ್ರಮ ವಿವಾದ ಸೇರಿದಂತೆ ಅನೇಕ ಪ್ರಕರಣಗಳಿದ್ದು, ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪ್ರಕರಣವಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಅವರು ಅವನ ಉಪಟಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಕೋಳ್ಳೆಗಾಲ ತಾಲೂಕಿನ ಹನೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿ ಪಾರು ಮಾಡಿದ್ದರು.
ಇತ್ತೀಚೆಗೆಷ್ಟೆ ಆತ ಜಾಮೀನು ಪಡೆದು ಹೊರ ಬಂದಿದ್ದ.ಅಲ್ಲದೆ, ಧಾರವಾಡದಿಂದ ಕಾರವಾರದ ದಾಂಡೇಲಿಯಲ್ಲಿ ರೆಸಾರ್ಟ್ ತೆಗೆದು ಅಲ್ಲಿಗೆ ಸ್ಥಳಾಂತರಗೊಂಡಿದ್ದ ಎಂದುತಿಳಿದುಬಂದಿದೆ.