ರಾಜ್ಯ

ಗದಗನ ಕೀಟನಾಶಕ ಮಾರಾಟ ಮಳಿಗೆ ಪರವಾನಿಗೆ ಅಮಾನತು

ಗದಗ prajakiran.com  :  ಗದಗ ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಅ.1 ರಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ)  ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ  ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು  ಉಲ್ಲಂಘಿಸಿರುವುದು ದೃಢಪಟ್ಟಿದೆ.

ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ  ಕಣವಿ ಇವರ ಪರವಾನಿಗೆಯನ್ನು  ಅಮಾನತ್ತಿನಲ್ಲಿಟ್ಟು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ  

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *