ಗದಗ prajakiran.com : ಗದಗ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶನಿವಾರ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಕಿಡಿ ಕಾರಿದ ಪ್ರತಿಭಟನಾಕಾರರು ಒಂದೇ ವಾರದಲ್ಲಿ ಇಬ್ಬರು ಆರೋಗ್ಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹಲವರಿಗೆ ಪಾಸಿಟಿವ್ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗದಗನ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಮಂಜುನಾಥ ತಳವಾರಿ (೪೫) ಕರೋನಾ ದಿಂದ ಸಾವನ್ನಪ್ಪಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಯಾಗಿದ್ದಾರೆ.
ಕೋವಿಡ್ ವಿಷಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೂಲ ಸೌಲಭ್ಯ ನೀಡುವಂತೆ ಆಗ್ರಹಿಸಿದರು.
ಪಾಸಿಟಿವ್ ಬಂದ ಆರೋಗ್ಯ ಸಿಬ್ಬಂದಿಗಳಿಗೆ ಆಕ್ಸಿಜನ್, ಪ್ರತ್ಯೇಕ ವಾರ್ಡ್ ನೀಡುವಂತೆ ಒತ್ತಾಯ ಮಾಡಿದರು. ಅಲ್ಲದೆ, ಎಲ್ಲಾ ಸಿಬ್ಬಂದಿಗಳಿಗೆ N95 ಮಾಸ್ಕ್, ಸೈನಿಟೆಜರ್, ಕಿಟ್, ಕ್ವಾರಂಟೈನ್ ವ್ಯವಸ್ಥೆ, ರಜೆ ಕಲ್ಪಿಸುವಂತೆ ಬೇಡಿಕೆಯಿಟ್ಟರು.
ಅದರಲ್ಲೂ, ಡಾಕ್ಟರ್, ಸ್ಟಾಪ್ ನರ್ಸ್, ಹಿರಿಯ ಹಾಗೂ ಕಿರಿಯ ಆರೋಗ್ಯ ಸಹಾಯಕರು, ಆಸ್ಪತ್ರೆ ಔಷಧ ವಿತರಕರು, ಲ್ಯಾಬ್ ಟೆಕ್ನಿಷಿಯನ್, ಡಾಟಾ ಎಂಟ್ರಿ ಆಪರೇಟಿಂಗ್ ಹಾಗೂ ಇತರೆ ಸಿಬ್ಬಂದಿಗಳು ಹೋರಾಟಕ್ಕೆ ಸಾಥ್ ನೀಡಿದರು.