ರಾಜ್ಯ

ಗದಗ ಜಿಮ್ಸ್ ಯಡವಟ್ಟಿಗೆ ಗರಂ…!

ಗದಗ prajakiran.com : ಲಿಪ್ಟ್ ನಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಮೃತ ದೇಹ ಬಿಟ್ಟು ಯಡವಟ್ಟು ಮಾಡಿದ್ದ ಗದಗ ಜಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಗದಗ ಜಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ಎಸ್‌.ಬೂಸರೆಡ್ಡಿ ಅವರ ಜೊತೆ ಮಾತನಾಡಿ ಸಮಸ್ಯೆಯಾಗದಂತೆ ಎಚ್ಚರವಹಿಸಿ ಎಂದು ಸೂಚನೆ ಕೊಟ್ಟಿದ್ದಾರೆ.

ಕೊರೊನಾ ರೋಗಿ ಮೃತದೇಹವನ್ನು ಕೆಲ ಹೊತ್ತು ಲಿಫ್ಟ್ ನಲ್ಲಿ ಬಿಟ್ಟು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಗಮನಿಸಿ ಮನಸ್ಸಿಗೆ ತೀವ್ರ ಬೇಸರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅಲ್ಲದೆ,  ಜಿಮ್ಸ್‌ ನಲ್ಲಿ ಇಂತಹ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಗದಗ ಜಿಮ್ಸ್ ಲಿಫ್ಟ್ ನಲ್ಲಿ ಸಿಬ್ಬಂದಿ ಶವ ಯಾಕೆ ಹೀಗೆ ಬಿಟ್ಟುಹೋಗಿದ್ದಾರೆ ಎಂದು ಕೆಲವರು ಗಾಬರಿಗೊಂಡಿದ್ದರು. ಅಲ್ಲದೆ, ಆಸ್ಪತ್ರೆಯಲ್ಲಿ ಕೆಲ ಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು.

ಈ ಬಗ್ಗೆ ನಿನ್ನೇ ಮಾಧ್ಯಮಗಳಲ್ಲಿ ವರದಿಯಾದ ನಂತರ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಚ್ಚೆತ್ತುಕೊಂಡದ್ದನ್ನು ಇಲ್ಲಿ ಸ್ಮರಿಸಬಹುದು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *