ರಾಜ್ಯ

ಗದಗನಲ್ಲೂ ಸಹ ಪಿಎಫ್ಐ ಸಂಘಟನೆಯ ಇಬ್ಬರು ಕಾರ್ಯಕರ್ತರು ಪೊಲೀಸರ ವಶಕ್ಕೆ

ಗದಗ prajakiran.com : ರಾಜ್ಯಾದ್ಯಂತ ಪಿಎಫ್ ಐ ಸಂಘಟನೆ ಕಾರ್ಯಕರ್ತರ ಮನೆ ಮೇಲೆ ಪೊಲೀಸರ ದಾಳಿ ಹಾಗೂ ಬಂಧನ ಕಾರ್ಯ ನಡೆಯುತ್ತಿದ್ದು , ಗದಗನಲ್ಲೂ ಸಹ ಪಿಎಫ್ಐ ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ.

ರೆಹಮತ್ ನಗರದ ನಿವಾಸಿಯಾದ ರುಸ್ತುಮ ಗೌಂಡಿ ಹಾಗೂ ಕಾಗದಗಾರ ಓಣಿ ನಿವಾಸಿಯಾದ ಸರ್ಪರಾಜ ದಂಡಿನ ಬಂಧಿತರು.

ಸಿಪಿಐ ಜಯಂತ ಗೌಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಠಾಣೆಗೆ ಕರೆ ತಂದು ವಿಚಾರಣೆ ನಡೆಸಿ, ಬಳಿಕ ತಾಲೂಕು ದಂಡಾಧಿಕಾರಿಗಳೂ ಆಗಿರುವ ಗದಗ ತಹಶೀಲ್ದಾರ ಕಿಶನ್ ಕಲಾಲ ಮುಂದೆ ಹಾಜರು ಪಡಿಸಿದ್ದಾರೆ.

ರುಸ್ತುಂ ಗೌಂಡಿ ಹಾಗೂ ಸರ್ಫರಾಜ್ ದಂಡಿನ್ ಅವರಿಗೆ ಅಕ್ಟೋಬರ್ 2 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಗದಗ ತಹಶಿಲ್ದಾರ ಕಿಶನ್ ಕಲಾಲ ಅವರು ಆದೇಶ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *