ರಾಜ್ಯ

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡದೆ ಹಬ್ಬಕ್ಕೆ ಅಡ್ಡಿ : ಪ್ರಹ್ಲಾದ ಜೋಶಿ ಕಿಡಿ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :  ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಮತ್ತು ನಮ್ಮ ಹುಬ್ಬಳ್ಳಿ ಧಾರವಾಡದಲ್ಲೂ ಗಣೇಶೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಹುಬ್ಬಳ್ಳಿ ಚೆನ್ನಮ್ಮ ಮೈದಾನದಲ್ಲಿ(ಈದ್ಗಾ) ಕಳೆದ ವರ್ಷ ನ್ಯಾಯಾಲಯದ ಅನುಮತಿಯಂತೆ ಗಣಪತಿ ಕೂರಿಸಿ ಅತ್ಯಂತ ಶಾಂತಿಯುತವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗಿತ್ತು.

ಆದರೆ ಈ ಬಾರಿ ರಾಜ್ಯ ಸರಕಾರ ಜಿಲ್ಲಾಡಳಿತದ ಮೂಲಕ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡದೆ ಹಬ್ಬಕ್ಕೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.

ಹಿಂದೂಗಳ ಪವಿತ್ರ ಹಬ್ಬ ಗಣೇಶ ಚತುರ್ಥಿ ವಿಜೃಂಭಣೆಯಿಂದ ನಡೆಸಲು ಸರಕಾರ ಈ ಕೂಡಲೇ ಜಿಲ್ಲಾಡಳಿತಕ್ಕೆ ಸೂಚಿಸಿ ಅನುಮತಿ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *