ಅಪರಾಧ

ಯುವಕರ ಮಧ್ಯೆ ಗಲಾಟೆ, ತಲವಾರಿನಲ್ಲಿ ಹಲ್ಲೆಗೆ ಯತ್ನ

ಪುತ್ತೂರು prajakiran.com : ಬನ್ನೂರು ಜೈನರಗುರಿ ಸಮೀಪ ಯುವಕರ ಮಧ್ಯೆ ಗಲಾಟೆ ನಡೆದು ಇಬ್ಬರು ಯುವಕರು ತಲವಾರಿನಲ್ಲಿ ಹಲ್ಲೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಜು.6 ರ ರಾತ್ರಿ ಯುವಕರ ಗುಂಪೊಂದು ಕುಳಿತುಕೊಂಡು ಮಾತನಾಡುತ್ತಿದ್ದ ಸಮಯ ಇನ್ನೊಂದು ಕೋಮಿನ ಯುವಕರ ಗುಂಪು ಅಲ್ಲಿಗೆ ಆಗಮಿಸಿದ್ದು ಈ ಸಂದರ್ಭ ಕ್ಷುಲ್ಲಕ ವಿಚಾರದಲ್ಲಿ ಅವರೊಳಗೆ ಮಾತಿನ ಚಕಮಕಿ ನಡೆದಿದೆ.

ನಂತರದ ಸ್ಥಳೀಯ ಅಂಗಡಿಯೊಂದರಲ್ಲಿದ್ದ ಕೆಲ ಯುವಕರ ಮೇಲೆ ಇನ್ನೊಂದು ಕೋಮಿನ ಯುವಕರಿಬ್ಬರು ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿ ಪರಾರಿಯಾಗಿದ್ದಾರೆ.

ಘಟನೆಯಿಂದಾಗಿ ಸ್ಥಳದಲ್ಲಿ ತುಸು ಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತಾದರೂ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಘರ್ಷಣೆಯನ್ನು ತಪ್ಪಿಸಿದ್ದಾರೆ.

ಘಟನೆ ಕುರಿತು ಫಯಾಝ್ ಎಂಬವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಅಭಿಜಿತ್ ಮತ್ತು ಶರತ್ ಎಂಬುವವರು ತಲವಾರ್ ಪ್ರದರ್ಶಿಸುತ್ತಾ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *