ಬೆಳಗಾವಿ prajakiran.com : ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಮಾವ ಗಂಗಣ್ಣ ಶಿಂತ್ರಿ ಭಾನುವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು.
ಅವರು ಹಿರಿಯ ಮಗಳು ಶಿವಲೀಲಾ ವಿನಯ ಕುಲಕರ್ಣಿ, ಮಗ ಶಿವಾ ಶಿಂತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇವರು ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಬಹು ಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಜಾಮೀನು ಮೇಲೆ ಹೊರಬಂದಿದ್ದರು.
ನಾಲ್ವರು ಪಾಲುದಾರರ ಪೈಕಿ ಇವರು ಒಬ್ಬರಾಗಿದ್ದರು.
ಮೃತರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಇರುವ ಯಡ್ರಾಮಿ ತೋಟದಲ್ಲಿ ಜ. 24 ರಂದು ಸಾಯಂಕಾಲ 4:30 ಕ್ಕೆ ಜರುಗುವುದು.
ಸದ್ಯ ಇವರ ಅಳಿಯ, ಮಾಜಿ ಸಚಿವ ವಿನಯ ಕುಲಕರ್ಣಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಸಂಬಂಧ ಸಿಬಿಐನಿಂದ ಬಂಧನಕ್ಕೊಳಗಾಗಿದ್ದು, ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಇದ್ದಾರೆ.
ಗಂಗಣ್ಣ ಶಿಂತ್ರಿ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಎಂದು ವಿನಯ್ ಕುಲಕರ್ಣಿ ಅಭಿಮಾನಿ ಬಳಗದವರು ಸಂತಾಪ ಸೂಚಿಸಿದ್ದಾರೆ.