ರಾಜ್ಯ

ಧಾರವಾಡದ ಮುಮ್ಮಿಗಟ್ಟಿ ಬಳಿ ಸಿಲಿಂಡರ್ ಗ್ಯಾಸ್ ತುಂಬಿಕೊಂಡ ಟ್ಯಾಂಕರ್‌ ಸಿಲುಕಿ ಆತಂಕ

ಧಾರವಾಡ ಪ್ರಜಾಕಿರಣ.ಕಾಮ್ : ಸಿಲಿಂಡರ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್‌ವೊಂದು ಸೇತುವೆ ಕೆಳಗಡೆ ಸಿಲುಕಿರುವ ಘಟನೆ ಧಾರವಾಡದ ಹೊರವಲಯದಲ್ಲಿ ನಡೆದಿದೆ.

ಈ ವೇಳೆ ಗ್ಯಾಸ್  ಸೋರಿಕೆಯಾಗುತ್ತಿರುವ ಪರಿಣಾಮ ಸುತ್ತಮುತ್ತಲೂ ಕಿಲೋಮೀಟರ್‌ಗಟ್ಟಲೇ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾರವಾಡ ನಗರ ಹಾಗೂ ಗ್ರಾಮೀಣ ಪೊಲೀಸರು ದೌಡಾಯಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಒಂದು ಕಿಲೋಮೀಟರ್ ವರೆಗೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

 

ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ಸೇತುವೆಯ ಕೆಳಗಡೆ ಹೋಗಿ ಟ್ಯಾಂಕರ್ ಹೊರಗಡೆ ತೆಗೆಯುವ ಪ್ರಯತ್ನ ನಡೆಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಆತಂಕ ಮೂಡಿಸಿದೆ.

ಸಾಕಷ್ಟು ಮುಂಜಾಗ್ರತೆ ವಹಿಸಿ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲು ಶ್ರಮಿಸುತ್ತಿದ್ದಾರೆ.

ಇದೇ ವೇಳೆ ಮುಮ್ಮಿಗಟ್ಟಿ ಗ್ರಾಮದ ವಿದ್ಯುತ್ ಸಪ್ಲೈ ಬಂದ್ ಮಾಡಲಾಗಿದೆ‌. ನಾಗರಿಕರು ಸಹಕರಿಸಲು ಮನವಿ ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *